IND vs AUS T20:ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇಂದು ಕ್ಯಾನ್ಬೆರಾದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸೀಸ್ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುವಂತೆ ಆಹ್ವಾನಿಸಿದರು. ಅದರಂತೆ, ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತ ಉತ್ತಮ ಆರಂಭ ಪಡೆದುಕೊಂಡಿತು. ಅಭಿಷೇಕ್ ಶರ್ಮಾ ಮತ್ತು ಶುಭ್ಮನ್ ಗಿಲ್ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು 35 ರನ್ಗಳ ಜೊತೆಯಾಟವಾಡಿದರು. ಅಭಿಷೇಕ್ ಆರಂಭದಿಂದಲೇ ಎಂದಿನಂತೆ ಹೊಡಿಬಡಿ ಆಟಕ್ಕೆ ಮುಂದಾದರು.
14 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ 19 ರನ್ ಸಿಡಿಸಿದರು. ಆದರೆ, ನಥನ್ ಎಲ್ಲಿಸ್ ಎಸೆತದಲ್ಲಿ ಬೌಂಡರಿ ಬಾರಿಸುವ ಯತ್ನದಲ್ಲಿ ಟಿಮ್ ಡೇವಿಡ್ ಕೈಗೆ ಕ್ಯಾಚಿತ್ತು ಪೆವಿಲಿಯನ್ಗೆ ಮರಳಿದರು. ಈ ವೇಳೆ ಕ್ರೀಸಿಗೆ ಆಗಮಿಸಿದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಶುಭ್ಮನ್ ಗಿಲ್ ತಂಡದ ಸ್ಕೋರ್ ಹೆಚ್ಚಿಸತೊಡಗಿದರು. ಆದರೆ 5ನೇ ಓವರ್ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಗಿತ್ತು. 20 ಓವರ್ಗಳ ಪಂದ್ಯವನ್ನು 18 ಓವರ್ಗಳಿಗೆ ಕಡಿತಗೊಳಿಸಲಾಯಿತು.
ಅರ್ಧಗಂಟೆಯ ನಂತರ ಮಳೆ ನಿಂತ ಬೆನ್ನಲ್ಲೆ ಪಂದ್ಯ ಪುನಾರಂಭಗೊಂಡಿತು. 9. 4 ಓವರ್ ವೇಳೆ ಮತ್ತೆ ಮಳೆ ಬಂದ ಕಾರಣ ಪಂದ್ಯವನ್ನು ಮತ್ತೆ ನಿಲ್ಲಿಸಲಾಯಿತು. ಆದರೆ, ಮಳೆ ನಿಲ್ಲದ ಕಾರಣ ಅಂಪೈರ್ ಪಂದ್ಯ ರದ್ದುಗೊಳಿಸಿದರು. ಈ ವೇಳೆ ಭಾರತ 1 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತ್ತು.
ಉಪನಾಯಕ ಗಿಲ್ 20 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್ ಸಿಡಿಸಿ ಅಜೇಯ 37 ರನ್ ಕಲೆಹಾಕಿದರು. ಸೂರ್ಯಕುಮಾರ್ ಯಾದವ್ 24 ಎಸೆತಗಳನ್ನೆದುರಿಸಿ 39 ರನ್ ಬಾರಿಸಿದರು. ಎರಡನೇ ಪಂದ್ಯ:ಅ. 31ರಂದು ಉಭಯ ತಂಡಗಳು ಎರಡನೇ ಪಂದ್ಯ ಆಡಲಿವೆ. ಈ ಪಂದ್ಯ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
Ind vs Aus ಟಿ20 ವೇಳಾಪಟ್ಟಿ:2ನೇಪಂದ್ಯ - ಅಕ್ಟೋಬರ್ 31 (ಮೆಲ್ಬರ್ನ್)3ನೇ ಪಂದ್ಯ - ನವೆಂಬರ್ 2 (ಹೊಬಾರ್ಟ್)4ನೇ ಪಂದ್ಯ - ನವೆಂಬರ್ 6 (ಗೋಲ್ಡ್ ಕೋಸ್ಟ್)5ನೇ ಪಂದ್ಯ - ನವೆಂಬರ್ 8 (ಬ್ರಿಸ್ಬೇನ್)ಟಿ20 ಸರಣಿಗೆ ತಂಡಗಳು:ಭಾರತ:ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಅರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್. ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ಡಾರ್ಶಿಯಸ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯ್ನಿಸ್, ಆ್ಯಡಂ ಜಂಪಾ.








